ಹಾರಂಗಿ ಜಲಾಶಯ
ಹಾರಂಗಿ ಜಲಾಶಯ

'ಹಾರಂಗಿ ಜಲಾಶಯ ಸುಭದ್ರ, ವಾಟ್ಸ್ ಆಪ್ ವದಂತಿಗಳಿಗೆ ಕಿವಿಗೊಡಬೇಡಿ'

ಭೂ ಕುಸಿತ, ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೊಡಗು ಪ್ರದೇಶದ ಜನತೆ ಕಂಗಾಲಾಗಿರುವುದು ಒಂದೆಡೆಯಾದರೆ ಅದೇ ಜಿಲ್ಲೆಯಲ್ಲಿರುವ ಹಾರಂಗಿ ಜಲಾಶಯ ಬಿರುಕುಬಿಟ್ಟಿದೆ ಎಂಬ ಸುಳ್ಳು ಸುದ್ದಿಯನ್ನು
ಕೊಡಗು: ಭೂ ಕುಸಿತ, ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೊಡಗು ಪ್ರದೇಶದ ಜನತೆ ಕಂಗಾಲಾಗಿರುವುದು ಒಂದೆಡೆಯಾದರೆ ಅದೇ ಜಿಲ್ಲೆಯಲ್ಲಿರುವ ಹಾರಂಗಿ ಜಲಾಶಯ ಬಿರುಕುಬಿಟ್ಟಿದೆ ಎಂಬ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ವಾಟ್ಸ್ ಮೂಲಕ ಹರಿಯಬಿಡುತ್ತಿದ್ದಾರೆ. 
ವಾಟ್ಸ್ ಆಪ್ ನಲ್ಲಿ ಹಂಚಿಕೆಯಾಗುತ್ತಿರುವ ಈ ಸುದ್ದಿಯಿಂದ ಹಲವರು ಕಂಗಾಲಾಗಿದ್ದು, ಈ ವದಂತಿಗೆ ಕಿವಿಗೊಡದಂತೆ ಹಾರಂಗಿ ಜಲಾಶಯದ ಕಾರ್ಯಪಾಲಕ ಇಂಜಿನಿಯರ್ ಆರ್ ರಾಜೇಗೌಡ ಅವರು ಮಾಧ್ಯಮ ಪ್ರಕಟಣೆಯಲ್ಲಿ ಜನತೆಗೆ ಮನವಿ ಮಾಡಿದ್ದಾರೆ. 
ಕೊಡಗು ಜಿಲ್ಲೆಯ ಹಾರಂಗಿ ಜಲಾಶಯ ಸುಭದ್ರವಾಗಿದೆ, ಜಲಾಶಯ ಬಿರುಕುಬಿಟ್ಟಿದೆ ಎಂಬ ಸುಳ್ಳು ಸುದ್ದಿಯನ್ನು ವಾಟ್ಸ್ ಆಪ್ ನಲ್ಲಿ ಹರಿಯಬಿಡಲಾಗಿದೆ. ಆದರೆ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

Related Stories

No stories found.

Advertisement

X
Kannada Prabha
www.kannadaprabha.com