ಈಗಾಗಲೇ ಈ ಬಗ್ಗೆ ಸೂಚನೆಗಳನ್ನು ನೀಡಲಾಗಿದ್ದು, ಮೊಬೈಲ್ ಟ್ಯಾಂಕ್ ಗಳಲ್ಲಿಯೇ ಗಣೇಶ ಮೂರ್ತಿ ವಿಸರ್ಜನೆ ಮಾಡುವಂತೆ ತಿಳಿಸಲಾಗಿದೆ. ಪ್ರತೀ ವಾರ್ಡ್ ನಲ್ಲಿಯೂ ನಾಲ್ಕು ಮೊಬೈಲ್ ಟ್ಯಾಂಕ್ ಗಳನ್ನು ಇರಿಸಲಾಗುತ್ತದೆ. ಗಣೇಶ ಮೂರ್ತಿ ವಿಸರ್ಜನೆ ವೇಳೆ ಪೊಲೀಸರು ಭದ್ರತೆ ನೀಡಲಿದ್ದಾರೆ. ದೊಡ್ಡ ದೊಡ್ಡ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಕ್ರೇನ್ ಗಳನ್ನು ನೀಡಲಾಗುತ್ತದೆ. ಪ್ಲಾಸ್ಟರ್ ಪ್ಯಾರಿಸ್ ನಿಂದ ಪರಿಸರಕ್ಕೆ ಆಗುವ ಹಾನಿ ಕುರಿತಂತೆ ಶೀಘ್ರದಲ್ಲಿಯೇ ಘೋಷಣೆಗಳನ್ನು ಮಾಡಲಾಗುತ್ತದೆ ಎಂದಿದ್ದಾರೆ.