ಹಂಪಿಯ ಕೋದಂಡರಾಮ ದೇಗುಲ, ಪುರಂದರ ಮಂಟಪಕ್ಕೆ ನೀರು ನುಗ್ಗಿದೆ. ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಗಭದ್ರಾ ನೀರಿನ ಮಟ್ಟ ಏರಿಕೆಯಾಗಿದೆ. ಜಲಾಶಯದಿಂದ 1,50,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದ್ದು, ಇತ್ತೀಚಿನ ಕೆಲ ವರ್ಷಗಳಿಗೆ ಹೋಲಿಕೆ ಮಾಡಿದರೆ, ಜಲಾಶಯದಿಂದ ಇಷ್ಟು ಮಟ್ಟಿನ ನೀರನ್ನು ಇದೇ ಮೊದಲು ಬಿಡುಗಡೆ ಮಾಡಲಾಗಿದೆ. 2008ರಲ್ಲಿ 60,000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿತ್ತು. ಕಳೆದ ಭಾನುವಾರ 1,90,000ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿತ್ತು. ಇದಾದ ಬಳಿಕ 1,50,000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ತುಂಗಭದ್ರಾ ಮಂಡಳಿಯ ಅಧಿಕಾರಿಗಳು ಹೇಳಿದ್ದಾರೆ.