ಹೌದು..ಮಂಜಿನ ನಗರಿ ಮಡಿಕೇರಿಯಲ್ಲಿ ನರಕಸದೃಶ ವಾತಾವರಣ ಸೃಷ್ಟಿಯಾಗಿದ್ದು, ಎಲ್ಲಿ ನೋಡಿದರೂ ಕುಸಿದ ಗುಡ್ಡ, ಕಾಫಿ ತೋಟಗಳು, ಧರೆಗುರುಳಿದ ಮನೆಗಳು, ಭೂಮಂಡಲನ್ನೇ ಒಂದು ಮಾಡಿದ ಜಲರಾಶಿ, ಕುಸಿದ, ಬಿರುಕುಬಿಟ್ಟ ರಸ್ತೆಗಳು, ಅಡ್ಡಾದಿಡ್ಡಿ ನೆಲಕ್ಕುರಳಿದ ಮರಗಳು, ವಿದ್ಯುತ್ ಕಂಬಗಳು, ನೀರಿನಲ್ಲಿ ಮುಳುಗಡೆಯಾದ ವಸತಿ ಪ್ರದೇಶಗಳು, ಮುಗಿಲು ಮುಟ್ಟಿದ ಆಕ್ರಂದನ, ಒಂದೇ ಊರಲ್ಲಿ ಇದ್ದರೂ ತಮ್ಮವರನ್ನು ಸಂಪರ್ಕಿಸಲಾಗದೆ ಅಸಹಾಯಕತೆಯಿಂದ ಜನ ಕಣ್ಣೀರಿಡುತ್ತಿದ್ದಾರೆ.