ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭಾರೀ ಮಳೆಗೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತ ಭಾರೀ ಮಳೆ ಸುರಿದ ಹಿನ್ನಲೆಯಲ್ಲಿ ಈಗಾಗಲೇ ...

ಮಂಗಳೂರು: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತ ಭಾರೀ ಮಳೆ ಸುರಿದ ಹಿನ್ನಲೆಯಲ್ಲಿ ಈಗಾಗಲೇ ಭೂಕುಸಿತದಿಂದ ಶಿರಾಡಿ ಘಾಟ್ ಸಂಪೂರ್ಣ ಬಂದ್ ಆಗಿದ್ದು, ಇನ್ನು ತೆರವುಗೊಳ್ಳಲು ಮೂರ್ನಾಲ್ಕು ತಿಂಗಳು ಬೇಕಾಗಬಹುದು ಎಂದು ಅಧಿಕಾರಿಗಳು ಹೇಳಿದರು.

ಇದೀಗ ಸಕಲೇಶಪುರ-ಸುಬ್ರಹ್ಮಣ್ಯ ನಡುವೆ ಸುಮಾರು 40 ಕಡೆಗಳಲ್ಲಿ ಬಂಡೆ ಮತ್ತು ಮಣ್ಣು ಕುಸಿದಿರುವುದರಿಂದ ರೈಲು ಸಂಚಾರ ಕೂಡ ಸಂಪೂರ್ಣ ಬಂದ್ ಆಗಿದೆ. ಭಾರೀ ಪ್ರಮಾಣದಲ್ಲಿ ಗುಡ್ಡಗಳಿಂದ ಮಣ್ಣು ರೈಲ್ವೆ ಹಳಿ ಮೇಲೆ ಕುಸಿದು ರೈಲು ಸಂಚರಿಸದ ಸ್ಥಿತಿ ನಿರ್ಮಾಣವಾಗಿದೆ.

ಯಡಕುಮೇರಿ-ಶಿರಾಡಿ ಘಾಟ್ ನಡುವಿನ ರೈಲು ಹಳಿಗಳ ಮೇಲೆ ಸಹ ಅನೇಕ ಕಡೆಗಳಲ್ಲಿ ಗುಡ್ಜ ಕುಸಿದಿದೆ. ಇದರಿಂದ ಮಂಗಳೂರು-ಬೆಂಗಳೂರು ನಡುವೆ ರೈಲು ಸಂಚಾರ ಸದ್ಯಕ್ಕೆ ಸಂಪೂರ್ಣ ಬಂದ್ ಆಗಿದೆ.

Related Stories

No stories found.

Advertisement

X
Kannada Prabha
www.kannadaprabha.com