ಶಿಥಿಲ ಶಾಲಾ ಕಟ್ಟಡಗಳು: ಶಿಕ್ಷಣ ಇಲಾಖೆ ವಿರುದ್ಧ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿನ ಎರಡು ಸರ್ಕಾರಿ ಶಾಲೆಗಳ ಕಟ್ಟಡ ಶಿಥಿಲಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ
ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ
Updated on

ಬೆಂಗಳೂರು: ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿನ ಎರಡು ಸರ್ಕಾರಿ ಶಾಲೆಗಳ ಕಟ್ಟಡ ಶಿಥಿಲಕ್ಕೆ  ಸಂಬಂಧಿಸಿದಂತೆ  ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವಿರುದ್ಧ  ಸ್ವಯಂ ಪ್ರೇರಿತ  ಪ್ರಕರಣ ದಾಖಲಿಸಿದ್ದಾರೆ.

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅರಕೆರೆ ಗ್ರಾಮದ ಶಾಲೆ ಮತ್ತು   ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿನ ಮುನ್ಸಿಪಲ್  ಪ್ರೌಢಶಾಲೆಯ ಶಿಥಿಲಗೊಂಡ ಕಟ್ಟಡಗಳ ಬಗ್ಗೆ ಪತ್ರಿಕೆಯೊಂದರ ವರದಿ ಪ್ರಕಟಗೊಂಡ ನಂತರ ಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದಾರೆ.

ಈ ವಿಚಾರದ ಬಗ್ಗೆ ಉನ್ನತ ಸಂಸ್ಥೆಗಳು ಗಂಭೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಶೀಘ್ರದಲ್ಲಿಯೇ  ಶಿಥಿಲಗೊಂಡಿರುವ ಕಟ್ಟಡವನ್ನು  ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು  ಲೋಕಾಯುಕ್ತರು ನೋಟಿಸ್ ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com