ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವತಿಯಿಂದ ಸಚಿವರ ನೇತೃತ್ವದ ತಂಡ ಶನಿವಾರದಿಂದ ನಾಲ್ಕು ದಿನ ಕೊಡಗು ಪ್ರವಾಸ ಬೆಳೆಸಲಿದೆ. ಇಲ್ಲಿನ ಜನರಿಗೆ ಅತ್ಯಂತ ಅಗತ್ಯವಿರುವ ಬ್ಲಾಂಕೆಟ್, ಬಕೆಟ್, ಜಗ್, ನೈಟಿ, ಸ್ಯಾನಿಟರಿ ನ್ಯಾಪ್ಕಿನ್, 500 ಟನ್ ಅಕ್ಕಿ, 100 ಕ್ವಿಂಟಾಲ್ ಸಕ್ಕರೆ, ಸಾಂಬಾರ್ ಪುಡಿ ಪ್ಯಾಕೆಟ್ ನಿರಾಶ್ರಿತರ ಶಿಬಿರಕ್ಕೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.