ಕೊಡಗು ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯಿತಿ: ಶಿಕ್ಷಣ ಸಚಿವ ಎನ್. ಮಹೇಶ್
ಕೊಡಗು ಜಿಲ್ಲೆಯ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರನ್ನು ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದ್ದಾರೆ.
ಬೆಂಗಳೂರು: ಮಹಾಮಳೆ ಹಾಗೂ ಭೂ ಕುಸಿತದಿಂದ ಸಂಕಷ್ಟಕ್ಕೊಳಗಾಗಿರುವ ಕೊಡಗು ಜಿಲ್ಲೆಯ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರನ್ನು ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದ್ದಾರೆ.
ಪ್ರವಾಹದಿಂದಾಗಿ ಶಾಲಾ ದಾಖಲಾತಿಗಳನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಅಂಕಪಟ್ಟಿ, ಮತ್ತಿತರ ದಾಖಲಾತಿಗಳನ್ನು ನೀಡಲಾಗುತ್ತಿದೆ. ಶಾಲಾ, ಕಾಲೇಜುಗಳ ಪುನರ್ ನಿರ್ಮಾಣಕ್ಕಾಗಿ 8 ಕೋಟಿ ರೂಪಾಯಿಗಳ ಅಗತ್ಯವಿದೆ ಎಂದು ಅವರು ತಿಳಿಸಿದರು.
ಪ್ರವಾಹ ಸಂತ್ರಸ್ತರಿಗಾಗಿ ಸಂಗ್ರಹವಾದ ವಿಪತ್ತು ಪರಿಹಾರ ನಿಧಿಯಲ್ಲಿ 4 ಕೋಟಿ ರೂಪಾಯಿ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗಿದೆ. ಉಳಿದ 4 ಕೋಟಿ ಮೊತ್ತವನ್ನು ಕಾರ್ಪೋರೇಟ್ ಸಂಸ್ಥೆಗಳ ಸಾರ್ವಜನಿಕ ಹೊಣೆಗಾರಿಕೆ ನಿಧಿಯಲ್ಲಿ ಸಂಗ್ರಹಿಸುವ ಉದ್ದೇಶ ಹೊಂದಲಾಗಿದೆ ಎಂದು ಸಚಿವರು ಹೇಳಿದರು.