ದೇಶದಾದ್ಯಂತ ಒಟ್ಟು 45 ಶಿಕ್ಷಕರು ಈ ಬಾರಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ಬೆಂಗಳೂರು ಉತ್ತರ ವಿಭಾಗದ ಜಿಲ್ಲ ಉಪನಿರ್ದೇಶಕರ ಕಚೇರಿಗೆ ಇತ್ತೀಚೆಗೆ ವರ್ಗಾವಣೆಗೊಂಡಿರುವ ಶಿಕ್ಷಕಿ ಶೈಲಾ, ಶಿಡ್ಲಘಟ್ಟ ತಾಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಡಾ.ಎಂ.ಶಿವಕುಮಾರ್ ಮತ್ತು ದೇವನಹಳ್ಳಿ ತಾಲೂಕಿನ ವಿಜಯಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ವಿಭಾಗದ ದೈಹಿಕ ಶಿಕ್ಷಕ ಡಾ.ಜಿ.ರಮೇಶಪ್ಪ ಅವರು ಆಯ್ಕೆಯಾಗಿದ್ದಾರೆ.