ಎಲ್ಲವೂ ಅಂದುಕೊಂಡಂತೆ ಆಗಿದ್ದಲ್ಲಿ ಇಂದು ಮಕ್ಕಂದೂರಿನಲ್ಲಿ ಕಲ್ಯಾಣ ಮಂಟಪದಲ್ಲಿ ಇವರ ಮದುವೆ ಅದ್ದೂರಿಯಾಗಿ ನಡೆಸಬೇಕಿತ್ತು. ಬಂಧುಗಳಿಗೆ ಆಹ್ವಾನ ಪತ್ರಿಕೆ ಹಂಚಲಾಗಿತ್ತು. ವಧುವಿಗೆ ಬೇಕಾದ ಆಭರಣ, ಬಚ್ಚೆ, ಖರ್ಚಿಗೆ ಹಣವನ್ನೂ ಮನೆಯಲ್ಲಿಟ್ಟಿದ್ದರು. ಆದರೆ, ಆ.12ರ ಮಹಾಮಳೆ ಹಾಗೂ ಭೂಕುಸಿತಕ್ಕೆ ಇಡೀ ಮನೆಯೇ ಕೊಚ್ಚಿ ಹೋಗಿತ್ತು.