ಈ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ ಅವರು, 'ಕೊಡಗಿನಲ್ಲಿ ರಕ್ಷಣಾ ಸಚಿವರ ಭೇಟಿ ವೇಳೆ ನಡೆದ ಘಟನೆಗೆ ವಿಷಾದವಿದೆ. ಘಟನೆ ಕುರಿತಂತೆ ಸಚಿವರೊಂದಿಗೆ ಫೋನ್ ಮೂಲಕ ಮಾತನಾಡಿದ್ದೇನೆ. ಸಣ್ಣ ಪುಟ್ಟ ಘಟನೆಗಳನ್ನು ಎಲ್ಲರೂ ಮರೆತು ಒಟ್ಟಿಗೆ ಕೈಜೋಡಿಸಿ ಪರಿಸ್ಥಿತಿಯನ್ನು ಎದುರಿಸಲು ನೆರವಾಗಬೇಕು. ಕೊಡಗಿನ ಪುನರ್ ನಿರ್ಮಾಣಕ್ಕೆ ಕೈಜೋಡಿಸಬೇಕು. ಪುನರ್ ನಿರ್ಮಾಣ ಕಾರ್ಯಕ್ಕೆ ಸಹಾಯಕ್ಕಾಗಿ ರಕ್ಷಣಾ ಸಚಿವೆ, ಕೇಂದ್ರಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.