ಬಿಎಸ್ ವೈಗೆ ಬಿಗ್​ ರಿಲೀಫ್​: ಅಕ್ರಮ ಡಿನೋಟಿಫಿಕೇಷನ್​ ಪ್ರಕರಣದಿಂದ ಖುಲಾಸೆ

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ನಂತರ ಈಗ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ...
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Updated on
ಬೆಂಗಳೂರು: ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ನಂತರ ಈಗ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರಿಗೂ ಕೋರ್ಟ್​ ಬಿಗ್​ ರಿಲೀಫ್​ ನೀಡಿದ್ದು, ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಿಂದ ಮಂಗಳವಾರ ಖುಲಾಸೆಗೊಂಡಿದ್ದಾರೆ.
ಯಡಿಯೂರಪ್ಪ ಅವರ ವಿರುದ್ಧ ಸಿರಾಜಿನ್ ಬಾಷಾ ಹಾಗೂ ಬಾಲಕೃಷ್ಣ ಎಂಬುವವರು ದಾಖಲಿಸಿದ್ದ ಅಕ್ರಮ ಡಿನೋಟಿಫಿಕೇಷನ್​ ಪ್ರಕರಣವನ್ನು ಸೆಷನ್ಸ್​ ಕೋರ್ಟ್ ಇಂದು ವಜಾಗೊಳಿಸಿದೆ.
ಬೆಂಗಳೂರಿನ ರಾಚೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ​ ಸೇರಿದಂತೆ ಒಟ್ಟು 15 ಪ್ರಕರಣಗಳಲ್ಲಿ ಯಡಿಯೂರಪ್ಪ ಆರೋಪಿಯಾಗಿದ್ದರು. ಈ ಎಲ್ಲಾ ಪ್ರಕರಣಗಳಿಂದಲೂ ಯಡಿಯೂರಪ್ಪ ಮುಕ್ತಿ ಪಡೆದಿದ್ದಾರೆ. 
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ವಿ. ಪಾಟೀಲ್​ ಅವರು ಯಡಿಯೂರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿ ಆದೇಶ ಹೊರಡಿಸಿದ್ದಾರೆ.
ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪ್ರಕರಣವನ್ನು ವಜಾಗೊಳಿಸುತ್ತಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.
ನಿನ್ನೆಯಷ್ಟೇ ಅರ್ಕಾವತಿ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಮೂವರನ್ನು ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಖುಲಾಸೆಗೊಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com