ಮಹದಾಯಿ ನದಿ ನೀರು ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ: ಸಚಿವ ಡಿಕೆ ಶಿವಕುಮಾರ್

ಮಹದಾಯಿ ನದಿ ನೀರು ರಾಜ್ಯದ ಎಲ್ಲರಿಗೂ ಸಂಬಂಧಿಸಿದ್ದು, ಈ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ...
ಮಹದಾಯಿ ನದಿ ನೀರು ಹಂಚಿಕೆ ವಿವಾದ
ಮಹದಾಯಿ ನದಿ ನೀರು ಹಂಚಿಕೆ ವಿವಾದ
Updated on

ಬೆಂಗಳೂರು: ಮಹದಾಯಿ ನದಿ ನೀರು ರಾಜ್ಯದ ಎಲ್ಲರಿಗೂ ಸಂಬಂಧಿಸಿದ್ದು, ಈ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ, ಈ ವಿಚಾರದಲ್ಲಿ ಜನರಲ್ಲಿ ಭರವಸೆ ಮೂಡಿಸುವಂತಹ ಮಾತುಗಳನ್ನು ಆಡುವುದು ಬಿಟ್ಟು ರಾಜಕೀಯ ಮಾಡುವುದು ಬೇಡ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಮತ್ತು ಗೋವಾ ಗಡಿಯ ಜನತೆಯ ಜೀವನಾಡಿ ಮಹದಾಯಿ ನದಿ ನೀರು ಹಂಚಿಕೆ ಕುರಿತು ಈ ವಾರದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಲಿದೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕೂಡ ಪರಿಶೀಲನೆಗೆ ಬರಲಿದ್ದಾರೆ ಎಂದರು.

ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಗೋವಾ ಸರ್ಕಾರ ರಾಷ್ಟ್ರೀಯ ಹಸಿರು ಪ್ರಾಧಿಕಾರದ ಮೊರೆ ಹೋಗುವ ಕುರಿತು ತೀರ್ಮಾನ ಮಾಡಿರುವ ಬಗ್ಗೆ ಮತ್ತು ಮುಂದಿನ ಹೋರಾಟದ ಸಿದ್ಧತೆ ಬಗ್ಗೆ ಸಿಎಂ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿ ತೀರ್ಮಾನಿಸಲಾಗುವುದು, ಈ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com