ಬೆಂಗಳೂರು: ಮಹದಾಯಿ ನದಿ ನೀರು ರಾಜ್ಯದ ಎಲ್ಲರಿಗೂ ಸಂಬಂಧಿಸಿದ್ದು, ಈ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ, ಈ ವಿಚಾರದಲ್ಲಿ ಜನರಲ್ಲಿ ಭರವಸೆ ಮೂಡಿಸುವಂತಹ ಮಾತುಗಳನ್ನು ಆಡುವುದು ಬಿಟ್ಟು ರಾಜಕೀಯ ಮಾಡುವುದು ಬೇಡ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಮತ್ತು ಗೋವಾ ಗಡಿಯ ಜನತೆಯ ಜೀವನಾಡಿ ಮಹದಾಯಿ ನದಿ ನೀರು ಹಂಚಿಕೆ ಕುರಿತು ಈ ವಾರದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಲಿದೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಕೂಡ ಪರಿಶೀಲನೆಗೆ ಬರಲಿದ್ದಾರೆ ಎಂದರು.
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಗೋವಾ ಸರ್ಕಾರ ರಾಷ್ಟ್ರೀಯ ಹಸಿರು ಪ್ರಾಧಿಕಾರದ ಮೊರೆ ಹೋಗುವ ಕುರಿತು ತೀರ್ಮಾನ ಮಾಡಿರುವ ಬಗ್ಗೆ ಮತ್ತು ಮುಂದಿನ ಹೋರಾಟದ ಸಿದ್ಧತೆ ಬಗ್ಗೆ ಸಿಎಂ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿ ತೀರ್ಮಾನಿಸಲಾಗುವುದು, ಈ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದರು.
Advertisement