ಇಂದು ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಬರ ಮತ್ತು ಪ್ರವಾಹದಿಂದ ರಾಜ್ಯ ತತ್ತರಿಸಿದೆ. ಹೀಗಾಗಿ ಈ ವರ್ಷ ಸರಳ ದಸರಾ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಪ್ರವಾಹದಿಂದಾಗಿ ಕೊಡಗು ಸಂಕಷ್ಟದಲ್ಲಿದೆ, ಕೆಲವೆಡೆ ಬರದ ವಾತಾವರಣ ಉಂಟಾಗಿದೆ. ಮಾಹಿತಿ ಪ್ರಕಾರ 65 ತಾಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಬೇಕಾದ ಸ್ಥಿತಿಯಿದೆ. ಹೀಗಾಗಿ ಈ ಬಾರಿ ವೈಭವೀಕರಿಸುವ ದಸರಾ ಸಾಧ್ಯವಿಲ್ಲ. ಬದಲಾಗಿ ಸಂಪ್ರದಾಯಿಕ ಸರಳ ದಸರಾ ನಡೆಯಲಿದೆ. ಈ ಕುರಿತು ದಸರ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.