ಮೈಸೂರು: ಗ್ರಾಮ ಪಂಚಾಯತ್ ಸದಸ್ಯನ ಕೊಲೆ

ಹುಣಸೂರು ತಾಲ್ಲೂಕಿನ ಗಡ್ಡಿಗೆ ಗ್ರಾಮದಲ್ಲಿ ಕರಿಮುದ್ದನಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮೈಸೂರು: ಹುಣಸೂರು ತಾಲ್ಲೂಕಿನ ಗಡ್ಡಿಗೆ ಗ್ರಾಮದಲ್ಲಿ ಕರಿಮುದ್ದನಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ನಾಗರಾಜ್ ಅವರನ್ನು ಅವರ ಅಂಗಡಿಯಲ್ಲಿ ನಿನ್ನೆ ಕೊಲೆ ಮಾಡಲಾಗಿದೆ.

ನಿನ್ನೆ ಬೆಳಗ್ಗೆ 11.30ರ ಸುಮಾರಿಗೆ ನಾಗರಾಜ್ ತಮ್ಮ ಅಂಗಡಿಯಲ್ಲಿದ್ದಾಗ ಇಬ್ಬರು ಪರಿಚಿತ ವ್ಯಕ್ತಿಗಳು ಬಂದರು. ಅವರನ್ನು ಲೋಕೇಶ್ ಮತ್ತು ನಾಗರಾಜ್ ಅವರ ಬಾವ ಕಾರ್ತಿಕ್ ಎಂದು ಗುರುತಿಸಲಾಗಿದೆ. ಅಂಗಡಿಗೆ ಬಂದವರೇ ನಾಗರಾಜ್ ತಲೆಗೆ ಗ್ಯಾಸ್ ಸ್ಟೌವ್ ನಿಂದ ಹೊಡೆದು ಪರಾರಿಯಾದರು.

ನಾಗರಾಜ್ ಗೆ ಮಹಿಳೆಯೊಬ್ಬರ ಜೊತೆ ಅಕ್ರಮ ಸಂಬಂಧವಿತ್ತು ಎಂದು ಹೇಳಲಾಗಿದ್ದು ಇದುವೇ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬಿಳಿಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com