ಕುರಣೆ ತಾಯಿ ರೇಖಾ ಮಾತನಾಡಿ, ಎಸ್ಐಟಿ ಅಧಿಕಾರಿಗಳು ಕೇವಲ ನನ್ನ ಮಗನಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ. ವಿಚಾರಣೆ ನೆಪದಲ್ಲಿ ನನ್ನ ಹಿರಿಯ ಮಗ ಭರತ್ ನನ್ನೂ ಕೂಡ ಎಸ್ಐಟಿ ಅಧಿಕಾರಿಗಳು 5 ಬಾರಿ ವಶಕ್ಕೆ ಪಡೆದುಕೊಂಡಿದ್ದರು. ಎಸ್ಐಟಿ ಅಧಿಕಾರಿಗಳ ಕಿರುಕುಳವನ್ನು ಅನುಭವಿಸಲು ತಿಂಗಳಿನಲ್ಲಿ 5 ಬಾರಿ ನನ್ನ ಮಗ ಬೆಂಗಳೂರಿಗೆ ಹೋಗಿ ಬಂದಿದ್ದ ಎಂದು ಹೇಳಿದ್ದಾರೆ.