ಗಣೇಶ ಉತ್ಸವದ ವೇಳೆ ದುರಂತ: ತಲೆ ಮೇಲೆ ಸಿಡಿದ ಪಟಾಕಿ, ಯುವತಿ ಸಾವು

ಗಣೇಶ ಉತ್ಸವದ ವೇಳೆ ನಡೆದ ಪಟಾಕಿ ದುರಂತದಲ್ಲಿ 21 ವರ್ಷ ಯುವತಿಯೊಬ್ಬಳು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಭಾನುವಾರ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ತಿಪಟೂರು: ಗಣೇಶ ಉತ್ಸವದ ವೇಳೆ ನಡೆದ ಪಟಾಕಿ ದುರಂತದಲ್ಲಿ 21 ವರ್ಷ ಯುವತಿಯೊಬ್ಬಳು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಭಾನುವಾರ ನಡೆದಿದೆ. 
ಸಿತಾರ (21) ಮೃತಪಟ್ಟ ಯುವತಿಯೆಂದು ಹೇಳಲಾಗುತ್ತಿದೆ. ಗಣೇಶ ಉತ್ಸವದ ವೇಳೆ ಭಾರೀ ಪ್ರಮಾಣದ ಸಿಡಿಮದ್ದುಗಳನ್ನು ಸಿಡಿಸಲಾಗುತ್ತಿತ್ತು. ಈ ವೇಳೆ ಪಟಾಕಿಯೊಂದಿ ಸಿತಾರ ಅವರ ತಲೆ ಮೇಲೆ ಬಿದ್ದು ಸಿಡಿದಿದೆ. 
ಇದರಿಂದ ಸಿತಾರಾ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಯುವತಿಯನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲು ಯತ್ನಿಸಿದ್ದಾರೆ. ಆದರೆ, ಮಾರ್ಗದ ಮಧ್ಯೆಯೇ ಸಿತಾರಾ ಅವರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 
ಘಟನೆ ಸಂಬಂಧ ತಿಪಟೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com