ಡಿ.7ರಂದು ಮೇಕೆದಾಟು ಹಾಗೂ ಶಿವನ ಸಮುದ್ರ ನೋಡಿಕೊಂಡು ರಾತ್ರಿ ಕೆಆರ್ ಎಸ್ಗೆ ತೆರಳಲಾಗುವುದು. ಕೆಆರ್ಎಸ್ನಲ್ಲಿ ಡಿಸ್ನಿಲ್ಯಾಂಡ್ ಮಾದರಿಯ ಯೋಜನೆ ಅನುಷ್ಠಾನ ಮಾಡುವ ಕುರಿತು ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವರ ಜತೆ ಚರ್ಚಿಸಲಾಗುವುದು. ಡಿಸ್ನಿಲ್ಯಾಂಡ್ ನಿರ್ಮಾಣಕ್ಕೆ ಒಂದು ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಆ ಸಮಿತಿಯಲ್ಲಿ ಮೈಸೂರು ರಾಜವಂಶಸ್ಥರು ಇರಲಿದ್ದಾರೆ ಎಲ್ಲರ ಅಭಿಪ್ರಾಯಗಳನ್ನು ಪಡೆದು ಯೋಜನೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.