ಬಂಧನಕ್ಕೊಳಗಾಗಿರುವ ಪತ್ರಕರ್ತ ಕಳೆದ 10ವರ್ಷಗಳಿಂದಲೂ ವಿವಿಧ ದಿನಪತ್ರಿಕೆಗಳ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದಾನೆ. ಈತನಿಗೆ ವಿವಾಹವಾಗಿದ್ದು, ಪುತ್ರಿ ಕೂಡ ಇದ್ದಾಳೆ.
ಈತನ ವಿರುದ್ಧ ಬೈಂದೂರು ಠಾಣೆಯಲ್ಲಿ 16, ಗಂಗೊಳ್ಳಿಯಲ್ಲಿ 3, ಕೊಲ್ಲೂರು ಮತ್ತು ಕುಂದಾಪುರ ಗ್ರಾಮದಲ್ಲಿ ತಲಾ 1 ಪ್ರಕರಣಗಳ ಸಹಿದ ಒಟ್ಟು 21 ಪ್ರಕರಣಗಳು ದಾಖಲಾಗಿವೆ.
ಈತನಿಂದ ದೌರ್ಜನ್ಯಕ್ಕೊಳಗಾಗಿದ್ದ ಬಾಲಕನೊಬ್ಬ ಮಾನಸಿಕ ಆಘಾತಕ್ಕೆ ಒಳಗಾಗಿದ್ದು, ಪೋಶಕರು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬಳಿಕ ಬಾಲಕ ತನ್ನ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ್ದ. ಬಳಿಕ ಬಾಲಕನ ಮನೆಯವರು ಎಸ್'ಪಿಗೆ ಮಾಹಿತಿ ನೀಡಿದ್ದಾರೆ.
ಇದರಂತೆ ಡಿವೈಎಸ್'ಪಿ ದಿನೇಶ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಿ, ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿತ್ತು. ನ.29 ರಂದು ಆರೋಪಿಯನ್ನು ಬಂಧಿಸಿದ್ದ ಅಧಿಕಾರಿಗಳು ಜಿಲ್ಲಾ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರ ಮನವಿ ಹಿನ್ನಲೆಯಲ್ಲಿ ಡಿ.3 ರವರೆಗೆ ಪೊಲೀಸ್ ಕಸ್ಟಡಿ ನೀಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.