ಬೆಂಗಳೂರು: ನವೆಂಬರ್ 30 ರಂದು ಕೊತ್ತನೂರಿನಲ್ಲಿ ಬಾರ್ ವೊಂದರಲ್ಲಿ ಲಾರಿ ಚಾಲಕನನ್ನು ಕೊಲೆ ಮಾಡಿದ್ದ ಆರೋಪಿ 19 ವರ್ಷದ ರೌಡಿ ಶೀಟರ್ ಮೇಲೆ ಹೆಣ್ಣೂರು ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಗುಂಡೇಟಿನಿಂದ ಗಾಯಗೊಂಡಿರುವ ರೌಡಿ ಶೀಟರ್ ಅಭಿಷೇಕ್ ಹಾಗೂ ಕಾನ್ಸ್ ಟೇಬಲ್ ಸಂತೋಷ್ ಲಮಾಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಲೆ, ದರೋಡೆ ಸೇರಿದಂತೆ ಸೇರಿದಂತೆ ಹಲವಾರು ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಅಭಿಷೇಕ್ ಈ ಹಿಂದೆ ಕೊತ್ತನೂರು ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಎನ್ನಲಾಗಿದೆ.
Advertisement