ಈ ಬಗ್ಗೆ ವಿಧಾನಸೌಧದಲ್ಲಿ ಮಾಜಿ ಸಿಎಂಗಳು ಹಾಗೂ ಮಾಜಿ ನೀರಾವರಿ ಸಚಿವರೊಂದಿಗೆ ಸಭೆ ನಡೆಸಿದ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ಅವರು, ತಮಿಳುನಾಡು ಸರ್ಕಾರ ರಾಜಕೀಯ ಕಾರಣಗಳಿಂದ ಯೋಜನೆಯನ್ನು ವಿರೋಧಿಸುತ್ತಿದೆ. ರಾಜ್ಯಕ್ಕಿಂತ ತಮಿಳುನಾಡಿಗೆ ಮೇಕೆದಾಟು ಯೋಜನೆಯಿಂದ ಹೆಚ್ಚು ಅನುಕೂಲವಿದೆ, ಹೀಗಿದ್ದೂ ಮೇಕೆದಾಟು ಯೋಜನೆಗೆ ವಿನಾಕಾರಣ ಅಡ್ಡಿ ಪಡಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.