ರಾಜ್ಯದಲ್ಲಿ ವಸತಿ, ಮೂಲಸೌಕರ್ಯ, ಉದ್ಯಮ, ಸೌರವಿದ್ಯುತ್, ಪ್ರವಾಸೋದ್ಯಮ ಯೋಜನೆಗಳಿಗೆ ಭೂಮಿಯ ಅಗತ್ಯವಿದೆ. ಆದರೆ, ಭೂ ಪರಿವರ್ತನೆ ಪ್ರಕ್ರಿಯೆ ವಿಳಂಬ ಆಗುತ್ತಿದ್ದರಿಂದ ಸಾಕಷ್ಟು ಸಮಸ್ಯೆ ಉಂಟಾಗುತ್ತಿತ್ತು. ಆದರೆ, ಇದೀಗ ಸಂಪುಟದಲ್ಲಿ ಕೈಗೊಂಡ ತೀರ್ಮಾನದಿಂದ ಇಡೀ ಭೂ ಪರಿವರ್ತನೆ ಪ್ರಕ್ರಿಯೆ ಆನ್ಲೈನ್ ಮೂಲಕ ನಡೆಯಲಿದೆ.