ತನ್ನ ಆದೇಶ ಪಾಲನೆ ಆಗುವುದನ್ನು ನೋಡಿಕೊಳ್ಳುವ ಸಲುವಾಗಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗಡೆ, ಐಐಎಸ್ಸಿಯ ನಿವೃತ್ತ ಪ್ರಾಧ್ಯಾಪಕ ಟಿ.ವಿ.ರಾಚಂದ್ರನ್ ಹಾಗೂ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ ಓರ್ವ ಸದಸ್ಯರನ್ನು ಒಳಗೊಂಡ ಉಸ್ತುವಾರಿ ಸಮಿತಿ ರಚಿಸಿದ ನ್ಯಾಯಾಧೀಕರಣ, ಬೆಳ್ಳಂದೂರು ಕೆರೆಯ ಪುರುತ್ಥಾನಕ್ಕೆ 1 ತಿಂಗಳಲ್ಲಿ ಕಾಲಮಿತಿಯ ಕ್ರಿಯಾ ಯೋಜನೆ ಸಿದ್ಧಪಡಿಸಿ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿತು.