ಇನ್ನೂ ಆ ಯುವಕನ ದುರದೃಷ್ಟಕ್ಕೆ ಪಕ್ಕದಲ್ಲೇ ಆಸ್ಪತ್ರೆ ಇದ್ದರೂ ಸಹ ಸಕಾಲಕ್ಕೆ ಅಂಬ್ಯುಲೆನ್ಸ್ ದೊರಕದೆ ಆಸ್ಪತ್ರೆಗೆ ದಾಖಲಿಸುವುದು ವಿಳಂಬವಾಗಿದೆ. ಕಡೆಗೂ ಕ್ರೂಸರ್ ವಾಹನ ಮೂಲಕ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದಾಗ ಅಲ್ಲಿ ಆತನ ಸ್ಥಿತಿ ಚಿಂತಾಜನಕವಾಗಿರುವುದು ಕಂಡ ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಗೆ ಕಳಿಸಿದ್ದಾರೆ. ಆದರೆ ಹುಬ್ಬಳ್ಳಿಗೆ ತೆರಳುವ ಮಾರ್ಗ ಮಧ್ಯೆಯೇ ಯುವಕ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.