ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಈ ಹಿಂದೆ ಸ್ನಾತಕೋತ್ತರ ವ್ಯಾಸಾಂಗಕ್ಕೆ ಮಾತ್ರ ಇದ್ದ ಆರ್ಥಿಕ ನೆರವನ್ನು ಸ್ನಾತಕಪೂರ್ವ ವ್ಯಾಸಾಂಗಕ್ಕೂ ಈ ಯೋಜನೆಯಲ್ಲಿ ಕಲ್ಪಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ನಡೆಸುತ್ತಿರುವ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ವಿದ್ಯಾರ್ಥಿಗಳಿಗೆ ವಿದೇಶಗಳಲ್ಲಿ ಉನ್ನತ ವ್ಯಾಸಾಂಗ ಮಾಡುವ ಅವಕಾಶ ಸಿಗಲಿದೆ ಎಂದರು.