ಸಿಐಡಿ ಪೋಲೀಸರು ವಿಚಾರಣೆ ನಡೆಸಿ ರಾಘವೇಶ್ವರ ಶ್ರೀ, ಕಲ್ಲಡ್ಕ ಪ್ರಭಾಕರ ಭತ್, ಶಿವಶಂಕರ ಭಟ್ ಅವರುಗಳ ವಿರುದ್ಧ ಪುತ್ತೂರು ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್, ಶಿವಶಂಕರ ಭಟ್ ಅವರಿಗೆ ನ್ಯಾಯಾಲಯ ವಾರಂಟ್ ಜಾರಿ ಮಾಡಿದರೆ ಶ್ರೀಗಳಿಗೆ ಸಮನ್ಸ್ ಜಾರಿಗೊಳಿಸಿತ್ತು.