ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಾಗಿನಿಂದ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ನಡೆಸುತ್ತಿರುವ ಈ ಹೋರಾಟದಲ್ಲಿ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಆರ್. ಅಶೋಕ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡಲು ಭಾಗವಹಿಸುತ್ತಿದ್ದಾರೆ.