ಪ್ರತೀ ವರ್ಷ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳು ಏಪ್ರಿಲ್, ಮೇ ಹಾಗೂ ಜೂನ್ ತಿಂಗಳಿನಲ್ಲಿ ನೀರು ಕೊರತೆಯಿಂದ ಸಂಕಷ್ಟವನ್ನು ಅನುಭವಿಸುತ್ತಿರುತ್ತದೆ ಎಂದು ಅಧಿವೇಶನದ ವೇಳೆ ಮಹಂತೇಶ್ ಕೌಜಲಗಿ ಮಠ್ ಅವರು ಪ್ರಶ್ನೆ ಮಾಡಿದರು. ಈ ವೇಳೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ನೀರು ಸಮಸ್ಯೆ ಪರಿಹರಿಸಲು ಮಹಾರಾಷ್ಟ್ರ ರಾಜ್ಯಕ್ಕೆ ನಿಯೋಗ ಭೇಟಿ ನೀಡುವಂತೆ ಮಾಡಲು ಸಚಿವರಿಗೆ ತಿಳಿಸಲಾಗುತ್ತದೆ ಎಂದು ಹೇಳಿದರು.