ಬಂಧಿತನನ್ನು ಎಂ ಕೆ ಅಶೋಕ ಎಂದು ಗುರುತಿಸಲಾಗಿದೆ. ಡಿಸೆಂಬರ್ 12ರಂದು ಕೆಲ ಹೂಡಿಕೆದಾರರು ವ್ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದ್ದರು. ಈ ವೇಳೆ ಜಯಿದ್ ಖಾನ್ ಹಾಗೂ ಸಿರಾಜುದ್ದೀನ್ ಎಂಬಿಬ್ಬರು ಹೂಡಿಕೆದಾರರು ಸಿಸಿಬಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಆಂಬಿಡೆಂಟ್ ಸಂಸ್ಥೆಯ ಮುಖ್ಯಸ್ಥ ಸೈಯದ್ ಫರಿದ್ ಅಹ್ಮದ್ ನನ್ನು ಪೋಲೀಸರು ರಕ್ಷಿಸುತ್ತಿದ್ದಾರೆ ಎಂದು ಅವರು ದೂರಿದ್ದರು. ಸೈಯದ್ ಈ ಪ್ರಕರಣದಲ್ಲಿ ಎರಡು ದಿನಗಳ ಮುನ್ನ ಜಾಮೀನು ಪಡೆದಿದ್ದರು. ಅಲ್ಲದೆ ಭೂಗತ ಜಗತ್ತಿನ ದೊರೆಗಳೊಡನೆ ಸಿಸಿಬಿ ಅಧಿಕಾರಿಗಳು ಸಂಪರ್ಕ ಹೊಂದಿದ್ದಾರೆ ಎಂದೂ ಅವರುಗಳು ಆರೋಪಿಸಿದ್ದರು.