ಘಟನೆ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಮುರುಗೇಶ್ ನಿರಾಣಿ, 'ಮಿಥನಾಲ್ ಹೊರಗಡೆ ಹೋಗದೇ ಇರೋದ್ರಿಂದ ಘಟನೆ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ ಜೀವ ವಿಮೆ ಅನುಕೂಲ ಮಾಡಿಸಿಕೊಡುತ್ತೇನೆ. ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದೇನೆ. ಮೃತಪಟ್ಟವರ ಕುಟುಂಬಸ್ಥರಲ್ಲಿ ಯಾರಾದ್ರೂ ನಮ್ಮ ಪ್ಯಾಕ್ಟರಿಯಲ್ಲಿ ಕೆಲಸ ಮಾಡುವ ಮನಸ್ಸಿದ್ದರೆ, ಅವರ ವಿದ್ಯಾರ್ಹತೆ ಅನುಗುಣವಾಗಿ ಕೆಲಸ ನೀಡುತ್ತೇನೆ. ಘಟನೆಯಲ್ಲಿ ಆರು ಜನ ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.