ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಜಾರಾಯಿ ಇಲಾಖೆಯ ಜಂಟಿ ಆಯುಕ್ತ ಜಯಪ್ರಕಾಶ್ ಅವರು, ಪ್ರಸಾದ ವಿತರಣೆಗೆ ಅನುಮತಿ ಪಡೆಯಬೇಕೆಂಬ ನಿಯಮ ಮೊದಲಿನಿಂದಲೂ ಇದೆ. 2012ರಲ್ಲೇ ಇದರ ಕುರಿತು ನಾವು ಸುತ್ತೋಲೆ ಹೊರಡಿಸಿದ್ದೆವು. ಈಗ ಮತ್ತೊಮ್ಮೆ ಬದಲಾದ ನಿಯಮ ಇರುವ ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದರು.