ಮುಧೋಳ ಸ್ಪೋಟದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ 2.5 ಲಕ್ಷ ರು ವೈಯಕ್ತಿಕ ಪರಿಹಾರ: ಶಿವಾನಂದ ಪಾಟೀಲ್

ಮಾಜಿ ಸಚಿವ ಮುರುಗೇಶ್ ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಪೋಟಗೊಂಡು ಸಾವನ್ನಪ್ಪಿದವರ ಕುಟುಂಬಕ್ಕೆ ಎರಡೂವರೆ ಲಕ್ಷ ರೂಪಾಯಿ ,..
ದುರಂತ ನಡೆದ ಸ್ಥಳ
ದುರಂತ ನಡೆದ ಸ್ಥಳ
ಬಾಗಲಕೋಟೆ: ಮಾಜಿ ಸಚಿವ ಮುರುಗೇಶ್ ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಪೋಟಗೊಂಡು ಸಾವನ್ನಪ್ಪಿದವರ ಕುಟುಂಬಕ್ಕೆ  ವೈಯಕ್ತಿಕವಾಗಿ ಎರಡೂವರೆ ಲಕ್ಷ ರೂಪಾಯಿ ಪರಿಹಾರವನ್ನು ಸಚಿವ ಶಿವಾನಂದ ಪಾಟೀಲ್ ನೀಡಿದ್ದಾರೆ.
ವಿಮೆ ಮಾಡಿದ ಮೃತ ಕಾರ್ಮಿಕರಿಗೆ 2.5 ಲಕ್ಷ ಪರಿಹಾರ ಸಿಗುತ್ತದೆ. ಇಲಾಖೆಯಿಂದ 8 ಲಕ್ಷ ರೂ. ಪರಿಹಾರ ಸಿಗುತ್ತದೆ. ಈಗಾಗಲೇ ಕಾರ್ಖಾನೆ ಮಾಲೀಕರು 5 ಲಕ್ಷ ಪರಿಹಾರ ಘೋಷಿಸಿದ್ದಾರೆ. 10 ಲಕ್ಷ ಕೊಡಿ ಅಂತ ಮಾಲೀಕರಿಗೆ ಹೇಳಿದ್ದೇವೆ ಎಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ ತಿಳಿಸಿದ್ದಾರೆ.
ಇನ್ನೂ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಅವರ ಮನವೊಲಿಸಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಕೋರುವುದಾಗಿ ಹೇಳಿದ್ದಾರೆ, ಜೊತೆಗೆ ಸ್ಪೋಟಕ್ಕೆ ಕಾರಣ ಏನು ಬಗ್ಗೆ ಸೂಕ್ತವಾದ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಒಂದು ವೇಳೆ ತಪ್ಪು ಕಂಡು ಬಂದರೆ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com