ನಂಜನಗೂಡು ಶ್ರೀಕಂಠೇಶ್ವರ ದೇವಾಲಯ
ರಾಜ್ಯ
ಈಗ, ನಂಜನಗೂಡು ದೇವಾಲಯದ ಅರ್ಚಕರ ಪ್ರತಿಭಟನೆ!
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಅರ್ಚಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಿದರು..
ಮೈಸೂರು: ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಅರ್ಚಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಿದರು.
ದೇವಾಸ್ಥಾನದ ಎರಡು ಪ್ರಮುಖ ದ್ವಾರಗಳನ್ನು ಮುಚ್ಚಲಾಗಿತ್ತು,.ಹೀಗಾಗಿ ದೇವಾಲಯಕ್ಕೆ ಬಂದ ಭಕ್ತಾದಿಗಳು ತಾವೇ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ದೇವಾಲಯದ ಒಟ್ಟು ಆದಾಯದಲ್ಲಿ ಶೇ,35 ರಷ್ಟು ಸಂಬಳವಾಗಿ ನೀಡಬೇಕು ಎಂಬ ನಿಯಮವಿದೆ, ಹೀಗಿದ್ದರೂ ಶೇ,17ರಷ್ಟು ಮಾತ್ರ ಸಂಬಳ ನೀಡಲಾಗುತ್ತಿದೆ ಎಂದು ನಂಜನಗೂಡು ದೇವಾಲಯ ಅಸೋಸಿಯೇಷನ್ ಅಧ್ಯಕ್ಷ ಶ್ರೀಕಂಠ ಹೇಳಿದ್ದಾರೆ.
ದೇವಾಲಯದ ಸಿಬ್ಬಂದಿಗೆ ಶೇ. 30 ರಷ್ಟು ಹಣವನ್ನು ವೈದ್ಯಕೀಯ ಸೌಲಭ್ಯ ನೀಡಬೇಕು ಹಾಗೂ ದೇವಾಲಯ ಸಿಬ್ಬಂದಿಗೆ 5 ಲಕ್ಷ ರು ವರೆಗೆ ನಿವೃತ್ತಿ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

