ಮಾರಮ್ಮ ವಿಷ ದುರಂತದಲ್ಲಿ ಕೃಷ್ಣ ನಾಯ್ಕ್ ಮತ್ತು ಮೈಲಿಬಾಯಿ ದಂಪತಿ ಇಬ್ಬರು ಮೃತಪಟ್ಟಿದ್ದರು. ಆದರೆ ಇವರಿಗೆ ರಾಣಿಬಾಯಿ, ಪ್ರಿಯಾಬಾಯಿ ಮತ್ತು ರಾಜೇಶ್ ಮೂವರು ಮಕ್ಕಳಿದ್ದು, ತಂದೆ-ತಾಯಿ ಅಗಲಿಕೆಯಿಂದ ಅನಾಥರಾಗಿದ್ದರು. ಇಬ್ಬರು ಹೆಣ್ಣು ಮಕ್ಕಳು ನರ್ಸಿಂಗ್ ಮಾಡುತ್ತಿದ್ದು, ಮಗ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾನೆ. ಈ ವೇಳೆ ಇವರ ಆಸರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮುಂದಾಗಿ, ಮೂವರು ಮಕ್ಕಳನ್ನು ದತ್ತು ಪಡೆಯುವುದಾಗಿ ಹೇಳಿತ್ತು. ಅಲ್ಲದೇ ಅವರ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ಭರಿಸಲು ಆಳ್ವಾಸ್ ಸಂಸ್ಥೆ ತೀರ್ಮಾನ ಮಾಡಿತ್ತು.