ಕೆರೆಗಳ ನಿರ್ಮಾಣದ ಇವರ ಕಾಯಕವು ಇವರನ್ನು ತಮ್ಮ ಸಂಬಂಧಿಕರು, ಬಂಧು ಮಿತ್ರರಿಂದ ದೂರ ಮಾಡಿದೆ. ಆದರೆ ಕಾಮೇಗೌಡ ಮಾತ್ರ ಇದಾವುದಕ್ಕೂ ಕ್ಯಾರೇ ಎನ್ನಲಾರರು. "ನನಗೆ ಮರಗಿಡಗಳು, ಪಕ್ಷಿಗಳು, ಈ ಕೆರೆಗಳೇ ನೆಂಟರು. ಕೆಲವರು ನನ್ನನ್ನು ಹಾಸ್ಯ ಮಾಡ್ತಾರೆ, ಇನ್ನೂ ಕೆಲವರು ವಿರೋಧಿಸುತ್ತಾರೆ. ಸರ್ಕಾರಿ ಜಾಗ ಕಬಳಿಸ್ತಾನೆ ಎಂತಾರೆ. ಆದರೆ ನಾನು ಯಾವುದಕ್ಕೂ ಹೆದರಲ್ಲ, ನಾನು ಎಲ್ಲಿ ಕೆರೆ ನಿರ್ಮಾಣಕ್ಕಾಗಿ ಗುಂಡಿ ತೋಡುವೆನೋ ಅಲ್ಲೆಲ್ಲಾ ನೀರಿ ಸಿಗುವುದು ಖಚಿತ, ಅದು ಬೇಸಿಗೆಯಲ್ಲಿಸಹ ಬತ್ತುವುದಿಲ್ಲ. ಇದನ್ನು ಬೇಕಾದರೆ ನಾನು ಯಾರಿಗೇ ಆಗಲಿ ಸವಾಲು ಹಾಕುವೆ" ಅವರು ಹೇಳುತ್ತಾರೆ.