ಬೆಳಗಾವಿ: ಸುವರ್ಣ ವಿಧಾನಸೌಧ ಬಳಿ ಕೃಷಿ ಪರಿಕರ ಮಾರಾಟಗಾರರ ಪ್ರತಿಭಟನೆ

ರೈತರಿಗೆ ಬೀಜಗಳು ಮತ್ತು ಕ್ರಿಮಿನಾಶಕಗಳನ್ನು ಮಾರಾಟ ಮಾಡಲು ಕಾನೂನಿನ ಪ್ರಕಾರ ಪರವಾನಗಿ ಇರುವವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಸುವರ್ಣ ವಿಧಾನಸೌಧ ಬಳಿ ರಾಜ್ಯ ಕೃಷಿ ಪರಿಕರ ಮಾರಾಟಗಾರರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ
ಪ್ರತಿಭಟನೆ
Updated on

ಬೆಳಗಾವಿ: ರೈತರಿಗೆ ಬೀಜಗಳು ಮತ್ತು ಕ್ರಿಮಿನಾಶಕಗಳನ್ನು ಮಾರಾಟ ಮಾಡಲು ಕಾನೂನಿನ ಪ್ರಕಾರ  ಪರವಾನಗಿ ಇರುವವರಿಗೆ ಮಾತ್ರ ಅವಕಾಶ ನೀಡಬೇಕು,  ಬೇರೆ ಯಾವುದೇ ವ್ಯಾಪಾರಿಗಳಿಗೆ ಅನುಮತಿ ನೀಡಬಾರದು ಎಂದು ಸರ್ಕಾರವನ್ನು ಒತ್ತಾಯಿಸಿ ಸುವರ್ಣ ವಿಧಾನಸೌಧ ಬಳಿ  ರಾಜ್ಯ ಕೃಷಿ ಪರಿಕರ ಮಾರಾಟಗಾರರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ 50ಸಾವಿರಕ್ಕೂ ಹೆಚ್ಚು ಮಾರಾಟಗಾರರು ಕಾನೂನು ಪ್ರಕಾರ ಪರವಾನಗಿ ಹೊಂದಿದ್ದು, ರೈತರಿಗೆ ಬೀಜ ಮತ್ತು ಕ್ರಿಮಿನಾಶಕಗಳನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ.  ರಾಜ್ಯಾದ್ಯಂತ ಸುಮಾರು 6 ಲಕ್ಷ ಜನರು ಅಕ್ರಮವಾಗಿ ಈ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದು, ಅಂತಹವರಿಗೆ ಅವಕಾಶ ನೀಡಬಾರದು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.

ಕೃಷಿ ಉತ್ಪನ್ನಗಳು ಮತ್ತು ಸಲಕರಣೆಗಳನ್ನು ನಿರ್ವಹಿಸುವ ವ್ಯಾಪಾರಿಗಳಿಗಾಗಿ ಇರುವ ವೆಬ್ ಸೈಟ್ ನಲ್ಲಿನ ಆನ್ ಲೈನ್ ಸೇವೆಯಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com