ಇದರಿಂದ ಆತಂಕಗೊಂಡ ಪೊಲೀಸ್ ಸಹಾಯವಾಣಿ ಸಿಬ್ಬಂದಿ ಕೂಡಲೇ ಜೆ.ಪಿ.ನಗರ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಬಳಿಕ ಮುಖ್ಯಮಂತ್ರಿಗಳ ವಿಶೇಷ ಭದ್ರತೆ ಪಡೆ, ಜೆ.ಪಿ.ನಗರ ಪೊಲೀಸರು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಇಡೀ ಮನೆಯ ಸುತ್ತ-ಮುತ್ತ ಪರಿಶೀಲಿಸಿದೆ. ಆದರೆ, ಯಾವುದೇ ಸ್ಫೋಟಕ ವಸ್ತುಗಳು ಪತ್ತಯಾಗಿಲ್ಲ. ಹೀಗಾಗಿ ಹುಸಿ ಕರೆ ಎಂದು ನಿಟ್ಟುಸಿರು ಬಿಟ್ಟಿದ್ದರು. ಈ ಸಂಬಂಧ ಜೆ.ಪಿ.ನಗರ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.