ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಪ್ರಿಯಾಂಕ್ ಖರ್ಗೆಯವರು, ಮೀಸಲು ಸೌಲಭ್ಯಕ್ಕೆ ಅರ್ಹರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪ್ರವರ್ಗ, ಒಬಿಸಿ ಅಭ್ಯರ್ಥಿಗಳಿಗೆ ಮೆರಿಟ್ ಮೇಲೆ ಜನರಲ್ ಪ್ರವರ್ಗದಲ್ಲೂ ಸಿಗುವ ಅವಕಾಶ ಕಸಿದುಕೊಳ್ಳುವ ತೀರ್ಮಾನ ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.