ಚಿತ್ರದುರ್ಗ: ವಿಷಾಹಾರ ಸೇವನೆ ಶಂಕೆ, ಒಂದೇ ಕುಟುಂಬದ ನಾಲ್ವರ ಸಾವು

ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಧಾರುಣ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಚಿತ್ರದುರ್ಗ: ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಧಾರುಣ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹುಲಿತೋಟ್ಲು ಗ್ರಾಮದಲ್ಲಿ ವಿಷ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಹುಲಿತೋಟ್ಲು ಗ್ರಾಮದಲ್ಲಿ ನಿವಾಸಿಗಳಾದ ತಂದೆ ಚಿತ್ತಪ್ಪ(80 ವರ್ಷ), ಪುತ್ರ ಶಶಿಧರ್​​​(40 ವರ್ಷ) ಪುತ್ರಿ ಭಾಗ್ಯಮ್ಮ (35 ವರ್ಷ) ಹಾಗೂ ಹೇಮಲತಾ (30 ವರ್ಷ) ಮೃತ ದುರ್ದೈವಿಗಳು. ನಿನ್ನೆ ರಾತ್ರಿ ಮನೆಯಲ್ಲಿ ಆಹಾರ ಸೇವಿಸಿದ ಬಳಿಕ ಮೂವರು ಅಸ್ವಸ್ಥರಾಗಿದ್ದಾರೆ. ಬಳಿಕ ಅಸ್ವಸ್ಥರನ್ನ ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇವೆರಲ್ಲರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಐಮಂಗಲ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com