ರಾಯಚೂರು: ಅಕ್ರಮ ತಡೆಯಲು ಹೋದ ಅಧಿಕಾರಿಯ ಮೇಲೆ ಲಾರಿ ಹರಿಸಿ ಪ್ರಾಣವನ್ನೇ ತೆಗೆದ್ರು!

ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಅಧಿಕಾರಿಯ ಮೇಲೆ ಲಾರಿ ಹರಿಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಅಕ್ರಮ ತಡೆಯಲು ಹೋದ ಅಧಿಕಾರಿಯ ಮೇಲೆ ಲಾರಿ ಹರಿಸಿ ಪ್ರಾಣವನ್ನೇ ತೆಗೆದ್ರು
ಅಕ್ರಮ ತಡೆಯಲು ಹೋದ ಅಧಿಕಾರಿಯ ಮೇಲೆ ಲಾರಿ ಹರಿಸಿ ಪ್ರಾಣವನ್ನೇ ತೆಗೆದ್ರು
ರಾಯಚೂರು: ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಅಧಿಕಾರಿಯ ಮೇಲೆ ಲಾರಿ ಹರಿಸಿ ಹತ್ಯೆ ಮಾಡಿರುವ  ಅಮಾನವೀಯ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರಿನ ಮಾನ್ವಿ ತಾಲೂಕು ಚೀಕಲಪರ್ವಿ ಸಮೀಪ ಶನಿವಾರ ಸಂಭವಿಸಿದ ಘಟನೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ತಮ್ಮ ಪ್ರಾಣ  ಕಳೆದುಕೊಂಡಿದ್ದಾರೆ.
ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಮಾಹಿತಿ ಪಡೆದಿದ್ದ ಸಾಹೇಬ್ ಪಟೇಲ್ ಮರಳು ಸಾಗಣೆ ಲಾರಿಯನ್ನು ತಡೆಯಲು ಮುಂದಾಗಿದ್ದಾರೆ.ಆಗ ಅಧಿಕಾರಿಯ ಮೇಲೆಯೇ ಲಾರಿ ಹತ್ತಿಸಿದ್ದ ದಂಧೆಕೋರರು ಅಧಿಕಾರಿಗೆ ಗಾಯವಾಗಿ ನೆಲಕ್ಕುರುಳುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದಾರೆ.
ಸಧ್ಯ ಮಾನ್ವಿ ಪೋಲೀಸರು ಸ್ಥಳಕ್ಕಾಗಮಿಸಿ ಘಟನೆಗೆ ಕಾರಣವಾದ ಲಾರಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಘಟನೆಯಲ್ಲಿ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದ  ಅಧಿಕಾರಿ ಸಾಹೇಬ್ ಪಟೇಲ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com