ಮಂಗಳೂರು: ಬಸ್, ಕಾರು ಹಾಗೂ ಟೆಂಪೋ ಸರಣಿ ಅಪಘಾತ ಸಂಭವಿಸಿ 13 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ, ಪಚ್ಚನಾಡಿಯ ಬೊಂಡೆಲ್ ರೈಲ್ವೇ ಹಳಿ ಬಳಿ ಶನಿವಾರ ರಾತ್ರಿ ನಡೆದಿದೆ.
ಬಸ್ ಚಾಲನೆ ಮಾಡುತ್ತಿ ಚಾಲಕ ವಾಹನದ ಮೇಲಿದ್ದ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ಟೆಂಪೋ, ಕಾರು, ಇತರೆ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆಂದು ಪೊಲೀಸ್ ಉಪ ಆಯುಕ್ತ ಉಮಾ ಪ್ರಶಾಂತ್ ಅವರು ಹೇಳಿದ್ದಾರೆ.
ರಸ್ತೆಯಲ್ಲಿ ತೆರಳುತ್ತಿದ್ದ ಬಸ್ ಸ್ಥಳದಲ್ಲಿದ್ದ ಕಾರಿಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ಇಬ್ಬರೂ ಚಾಲಕರಿಗೂ ಗಾಯವಾಗಿತ್ತು. ಬಳಿಕ ಸ್ಥಳದಲ್ಲಿ ಸರಣಿ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.