ಮರಳು ದಂಧೆಕೋರರ ಅಟ್ಟಹಾಸ: ಗ್ರಾಮಲೆಕ್ಕಾಧಿಕಾರಿಯ ಹತ್ಯೆಗೈದ ಲಾರಿ ಚಾಲಕ ಅರೆಸ್ಟ್

ಅಕ್ರಮ ಮರಳು ಸಾಗಿಸುವ ಲಾರಿಯನ್ನು ತಡೆಯಲು ಮುಂದಾದ ಅಧಿಕಾರಿ ಮೇಲೆ ಲಾರಿ ಹತ್ತಿಸಿ ಕೊಲೆಗೈದಿದ್ದ ಲಾರಿ ಚಾಲಕನನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಧಿಕಾರಿಯ ಮೇಲೆ ಹರಿದಿದ್ದ ಲಾರಿ
ಅಧಿಕಾರಿಯ ಮೇಲೆ ಹರಿದಿದ್ದ ಲಾರಿ
Updated on
ರಾಯಚೂರು: ಅಕ್ರಮ ಮರಳು ಸಾಗಿಸುವ ಲಾರಿಯನ್ನು ತಡೆಯಲು ಮುಂದಾದ ಅಧಿಕಾರಿ ಮೇಲೆ ಲಾರಿ ಹತ್ತಿಸಿ ಕೊಲೆಗೈದಿದ್ದ ಲಾರಿ ಚಾಲಕನನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
ರಾಯಚೂರಿನ ಮಾನ್ವಿ ತಾಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಶನಿವಾರ ಗ್ರಾಮ ಲೆಕ್ಕಾಧಿಕಾರಿಯ ಮೇಲೆ ಮರಳು ತುಂಬಿದ್ದ ಲಾರಿಯನ್ನೇ ಹರಿಸಿ ಹತ್ಯೆಗೈದಿದ್ದ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, ಪೊಲೀಸರು ಬಂಧಿಸಿದ್ದಾರೆ.
ರಂಗಪ್ಪ, ಬಂಧಿತ ಲಾರಿ ಚಾಲಕನಾಗಿದ್ದು,  ಸಾಹೇಬ್ ಪಟೇಲ್(45) ಮೃತ ಗ್ರಾಮ ಲೆಕ್ಕಾಧಿಕಾರಿಯನ್ನು ನಿನ್ನೆ ಲಾರಿ ಹತ್ತಿಸಿ ಕೊಲೆಗೈದಿದ್ದ. ರಾಯಚೂರಿನ ಮಾನ್ವಿ ತಾಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಶನಿವಾರ ಘಟನೆ ನಡೆದಿತ್ತು. ಸಾಹೇಬ್ ಪಟೇಲ್ ಅವರು ಚೀಕಪರ್ವಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತುಂಗಭದ್ರಾ ನದಿಯಿಂದ ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದ್ದರಿಂದ ಅವರು ಬುದ್ದಿನ್ನಿ ಗ್ರಾಮದಲ್ಲಿ ತಪಾಸಣೆಗೆ ಹೋಗಿದ್ದರು. 
ಈ ವೇಳೆ ಲಾರಿ ಚಾಲಕ ತಪ್ಪಿಸಿಕೊಳ್ಳಲು ಸಾಹೇಬ್ ಪಟೇಲ್ ​ರ ಕಾಲುಗಳ ಮೇಲೆ ಲಾರಿ ಹರಿಸಿದ್ದಾನೆ. ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು, ಮರಳು ದಂಧೆಕೋರರು ಎಸ್ಕೇಪ್ ಆಗಿದ್ದರು. ಗಂಭೀರ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಚಿಕಿತ್ಸೆ ಫಲಕಾರಿಯಾಗದೆ ರಿಮ್ಸ್​​ ಆಸ್ಪತ್ರೆಯಲ್ಲಿ ರಾತ್ರಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com