ಸಂಭ್ರಮಾಚರಣೆ ಮತ್ತಿನಲ್ಲಿ ಕೆಲವರು ಮದ್ಯ ಸೇವಿಸಿ ವಾಹನ ಚಲಾಯಿಸಬಹುದು. ಇದರಿಂದ ಮೇಲ್ಸೇತುವೆಗಳಲ್ಲಿ ಅಪಘಾತಕ್ಕೂ ಕಾರಣವಾಗಲಿದೆ. ಇನ್ನು ಕೆಲ ಕಿಡಿಗೇಡಿಗಳು ಆಚರಣೆ ನೆಪದಲ್ಲಿ ಪಾನಮತ್ತರಾಗಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ನಾಗರಿಕರಿಗೆ ತೊಂದರೆಯುಂಟು ಮಾಡುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ ಮೈಸೂರು ರಸ್ತೆ, ಹೊಸೂರು, ಯಶವಂತಪುರ, ರಿಚ್ಮಂಡ್ ಸರ್ಕರ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಪ್ರಮುಖ ಮೇಲ್ಸೇತುವೆಗಳ ಮೇಲೆ ವಾಹನಗಳ ಸಂಚಾರ ಬಂದ್ ಆಗಲಿದೆ. ಆದರೆ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಅಡಚಣೆಯಾಗದಂತೆ ಪೊಲೀಸರು ವ್ಯವಸ್ಥೆಗಳನ್ನು ಕಲ್ಪಿಸಲಿದ್ದಾರೆ. ಸಂಭ್ರಮಾಚರಣೆ ನಡೆಯುವ ಕಾರಣ ಎಂ.ಜಿ.ರಸ್ತೆ, ಬ್ರಿಗೇಡ್ ಹಾಗೂ ಚರ್ಚ್ ಸ್ಟ್ರೀಟ್ ಗಳಿಗೆ ವಾಹನಗಳ ಓಡಾಟಕ್ಕೆ ಬ್ರೇಕ್ ಬೀಳಲಿದೆ.