ಅಕ್ರಮ ಆಸ್ತಿ ಗಳಿಸಿದ ಅಧಿಕಾರಿಗಳಿಗೆ ಶಾಕ್: ರಾಜ್ಯದ ವಿವಿಧೆಡೆ ಎಸಿಬಿ ದಾಳಿ

ಶುಕ್ರವಾರ ಬೆಳಗ್ಗೆ ರಾಜ್ಯದ 17 ಕಡೆ ಏಕಕಾಲಕ್ಕೆ ದಾಳಿ ನಡೆಸಿ ಹಲವು ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ಶುಕ್ರವಾರ ಬೆಳಗ್ಗೆ ರಾಜ್ಯದ 17 ಕಡೆ ಏಕಕಾಲಕ್ಕೆ ದಾಳಿ ನಡೆಸಿ ಹಲವು ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ.
ಬೆಂಗಳೂರು ನಗರ, ಚಿಂತಾಮಣಿ, ಉಡುಪಿ, ಮೈಸೂರು , ಧಾರವಾಡದಲ್ಲಿ ಅಧಿಕಾರಿಗಳು ಏಕಕಾಲಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ದಾವಣಗೆರೆಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಹಂಸವೇಣಿ ಅವರ ಪತಿ ಕಾರವಾರದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎನ್ ಕುಮಾರ್ ಅವರ ಸಿದ್ದವೀರಪ್ಪ ಬಡಾವಣೆಯ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉಡುಪಿಯ ಮಾಜಿ ನಗರ ಸಭೆ ಆಯುಕ್ತ ಹಾಗೂ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾ ವಿದ್ಯಾಲಯದ ರೀಡರ್ ಮಂಜುನಾಥಯ್ಯ ಅವರ ಮಣಿಪಾಲದ ಫ್ಲ್ಯಾಟ್‌ ಮತ್ತು ಶಿವಮೊಗ್ಗದ ಸಂಬಂಧಿಕರ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com