ತಮಿಳುನಾಡು-ಕರ್ನಾಟಕದ ಗಡಿಯ ಮೇಕೆದಾಟುವಿನಲ್ಲಿ ಡ್ಯಾಂ ನಿರ್ಮಾಣ ಮಾಡಬೇಕೆಂಬುದು ರಾಜ್ಯದ ಬೇಡಿಕೆ. ಆದರೆ, ಇದಕ್ಕೆ ತಮಿಳುನಾಡು ಸರ್ಕಾರ ವಿರೋಧಿಸುತ್ತಲೇ ಬಂದಿದೆ. ಇದರ ಮಧ್ಯೆ, ಕೇಂದ್ರ ಸರ್ಕಾರ, ಅಣೆಕಟ್ಟು ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಿದ್ದು, ಡಿಪಿಆರ್ಗೆ ಸೂಚಿಸಿದ. ಕೇಂದ್ರ ಸರ್ಕಾರದ ಈ ಕ್ರಮದ ವಿರುದ್ಧ ತಮಿಳುನಾಡು ತೀವ್ರ ಪ್ರತಿಭಟನೆ ನಡೆಸಿದೆ. ಸಂಸತ್ತಿನಲ್ಲೂ ಗದ್ದಲ ಮಾಡಿದೆ.