ಬೆಂಗಳೂರು: ಸಹಜ ಹೆರಿಗೆ ಮೂಲಕ ಸಾವಿರಾರು ಮಕ್ಕಳಿಗೆ ಜೀವ ತುಂಬಿದಾಕೆ, ಪದ್ಮಶ್ರೀ ಪುರಸ್ಕೃತೆ ಡಾ.ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ಪಾವಗಡ ಸರ್ಕಾರಿ ಆಸ್ಪತ್ರೆಯೆ ಲೇಬರ್ ವಾರ್ಜ್ ಗೆ ಇಡಲಾಗಿದೆ,
ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಬುಧವಾರ ಈ ವಿಷಯ ತಿಳಿಸಿದ್ದಾರೆ. ಇನ್ನೂ ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಲೇಬರ್ ವಾರ್ಡ್ ಗೆ ಇಡಬೇಕು ಎಂದು ಅವರ ಪುತ್ರ ಪಾವಗಡ ಶ್ರೀರಾಮ್ ಮುಖ್ಯಮಂತ್ರಿ ಕುಮಾರ ಸ್ವಾಮಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
ಪದ್ಮಶ್ರೀ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ (98) ಡಿ.25 ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನರಸಮ್ಮ ಕಳೆದ 20 ದಿನಗಳಿಂದ ನಗರದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.