ಚಿಕ್ಕಜಾಲ, ದೇವನಹಳ್ಳಿ, ಏರ್'ಪೋರ್ಟ್, ಹೆಬ್ಬಾಳ, ಹುಳಿಮಾವು, ರಿಂಗ್ ರೋಡ್, ಹೆದ್ದಾರಿಗಳು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತವೆ. ಈ ವ್ಯಾಪ್ತಿಯಲ್ಲಿ ಅತೀ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಯಲಹಂಕ, ಹೆಬ್ಬಾಳ ಮತ್ತು ದೇವಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತವೆ. ಬಳ್ಳಾರಿ ರಸ್ತೆಯಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಅಪಘಾತ ತಡೆಗೆ ಕ್ರಮ ಕೈಗೊಳ್ಳುವಂತೆ ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೂ ಪತ್ರ ಬರೆಯಲಾಗಿದೆ ಎಂದು ಪೊಲೀಸರ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಹಳೇ ಮದ್ರಾಸ್ ರಸ್ತೆ ಬಳಿಯಿರುವ ಬಟ್ಟರಹಳ್ಳಿ ಜಂಕ್ಷನ್, ರಾಮಮೂರ್ತಿ ನಗರದ ಬಳಿಯಿರವ ಎಎಸ್ಆರ್ ಕನ್ವೆನ್ಷ.ನ್ ಹಾಲ್, ಲೌರಿ ಮೆಮೊರಿಯಲ್ ಹೈ ಸ್ಕೂಲ್ ಬಳಿ ಹಚ್ಚೆಚ್ಚು ಅಪಘಾತ ಸಂಭವಿಸುತ್ತವೆ ಎಂದು ಕೆಆರ್.ಪುರಂ ಪೊಲೀಸ್ ಠಾಣಾ ಪೊಲೀಸರು ತಿಳಿಸಿದ್ದಾರೆ.
ಬಟ್ಟರಹಳ್ಳಿ ಜಂಕ್ಷನ್ ಬಳಿ ಸ್ಪೀಡ್ ಬ್ರೇಕರ್ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಆದರೂ ನಾವು ಆರ್'ಟಿಒ ಕಚೇರಿಯನ್ನು ಹತ್ತಿರದಲ್ಲಿಯೇ ಸ್ಥಾಪನೆ ಮಾಡಿದ್ದೇವೆ. ಆದರೂ ಹೆದ್ದಾರಿ ಪ್ರಾಧಿಕಾರ ಇದಕ್ಕೂ ಅವಕಾಶವಿಲ್ಲ ಎಂದು ತಿಳಿಸಿದೆ. ಹೀಗಾಗಿ ಸ್ಪೀಡ್ ಬ್ರೇಕರ್ ನಿರ್ಮಾಣಕ್ಕೆ ಅನುಮತಿ ಕೋರಿ ಮತ್ತೆ ಪತ್ರ ಬರೆಯಲಾಗಿದೆ ಎಂದಿದ್ದಾರೆ.
ಭಟ್ಟರಹಳ್ಳಿ ಟ್ರಾಫಿಕ್ ಸಿಗ್ನಲ್ ಬಿಟ್ಟ ಬಳಿಕ ಸವಾರರು ವೇಗವನ್ನು ಹೆಚ್ಚಿಸುತ್ತಾರೆ. ಇದರಿಂತ ಅಪಘಾತಗಳು ಸಂಭವಿಸುತ್ತವೆ. ಪಾದಚಾರಿಗಳು ಹಾಗೂ ದ್ವಿಚಕ್ರ ಸವಾರರೇ ಹೆಚ್ಚು ಅಪಘಾತಕ್ಕೀಡಾಗುತ್ತಾರೆ ಎಂದು ತಿಳಿಸಿದ್ದಾರೆ.