ಬೆಳಗಾವಿ, ಬೀದರ್, ಧಾರವಾಡ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಮೋದಿ, ರಾಜ್ಯ ಸಮ್ಮಿಶ್ರ ಸರ್ಕಾರ ಮ್ಯುಸಿಕಲ್ ಚೇರ್ ಆಡುತ್ತಿದೆ. ಸಾಲಮನ್ನಾ ಹೆಸರಿನಲ್ಲಿ ಅವರು ಏನು ಮಾಡುತ್ತಿದ್ದಾರೋ ಅದು ಅತಿ ಕ್ರೂರವಾದದ್ದು ಎಂದು ಹೇಳಿದ್ದಾರೆ.