ಕಾರವಾರ: ಬಸ್ ಚಾಲಕನ ಸಮಯ ಪ್ರಜ್ಞೆ ಹಾಗೂ ಲಾರಿ ಚಾಲಕನ ಚಾಣಾಕ್ಷತೆಯಿಂದ 70 ಕ್ಕೂ ಅಧಿಕ ಪ್ರಯಾಣಿಕರ ಜೀವ ಉಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ಪ್ರದೇಶದ ಇಳಿಜಾರಿನಲ್ಲಿ ಇಂದು ನಡೆದಿದೆ.
ಚಾಲಕಿ ಲಾರಿ ಚಾಲಕ ಈರಣ್ಣ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಚಾಲಕ ಕತ್ತಿ ಕಾನಾಪುರ್ ತಮ್ಮ ಜೀವದ ಹಂಗನ್ನೇ ತೊರೆದು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 70 ಜನರ ಪ್ರಾಣ ಕಾಪಾಡಿದ್ದಾರೆ. ಬ್ರೇಕ್ ಫೇಲ್ ಆಗಿದ್ದ ಬಸ್ಸನ್ನು ಪದೇ ಪದೇ ತನ್ನ ಲಾರಿಗೆ ಗುದ್ದಿಸಿಕೊಂಡು ಪ್ರಯಾಣಿಕರನ್ನು ಅಪಾಯದಿಂದ ರಕ್ಷಿಸಿದ್ದಾರೆ.
Advertisement